ಹಾಸನ: ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಇಂದು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಬೆಂಗಳೂರಿನಲ್ಲಿ ಮೊದಲು ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಜಿಲ್ಲಾಡಳಿತದ ಪರವಾಗಿ ಆಹ್ವಾನ ನೀಡಿದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ನೀಡಲಾಯಿತು.
ನಾಡಿನ ಪ್ರಸಿದ್ಧ ಹಾಸನಾಂಬ ಜಾತ್ರಾ ಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ಹಾಸನದಲ್ಲಿ ಜರುಗಲಿದ್ದು, ಅದ್ಧೂರಿ ಸಿದ್ಧತೆ ಕೈಗೊಳ್ಳಲಾಗಿದೆ.
